ಬಾಗಲಕೋಟೆಯಲ್ಲಿ ಪ್ರಧಾನಿ ಮೋದಿ ಕೂಡಲ ಸಂಗಮವನ್ನು ಕುಂಡಾಲಾ ಸಂಗಮ ಎಂದು ತಪ್ಪಾಗಿ ಉಚ್ಚರಿಸಿದ್ದರು. ಇದೇ ವಿಚಾರವನ್ನು ಟ್ವಿಟರ್ ನಲ್ಲಿ ಪ್ರಸ್ತಾಪ ಮಾಡಿರುವ ಸಿಎಂ ಅದು ಕೂಡಲ ಸಂಗಮ, ಕುಂಡಾಲಾ ಸಂಗಮವಲ್ಲ.. ತಪ್ಪು ಉಚ್ಚಾರಣೆ ದೊಡ್ಡದೇನೂ ಅಲ್ಲ. ಕನ್ನಡಿಗರು ಉದಾರಿಗಳು, ಇಂತಹ ತಪ್ಪುಗಳನ್ನು ಕ್ಷಮಿಸಿಬಿಡುತ್ತಾರೆ. ನಿಮ್ಮ ಉಚ್ಛಾರಣೆಯಲ್ಲಿ ತಪ್ಪನ್ನಿರಿಸಿಕೊಂಡು ಬೇರೆಯವರ ತಪ್ಪಿನ ಬಗ್ಗೆ ಮಾತನಾಡುತ್ತಿರುವುದು ದುಃಖದ ಸಂಗತಿ ಎಂದು ಹೇಳಿದ್ದಾರೆ.