ರಾಮ ರಾಜ್ಯಕ್ಕಾಗಿ ಬಿಜೆಪಿಗೆ ಮತ ನೀಡಿ: ಯೋಗಿ ಆದಿತ್ಯನಾಥ್

ಬಿಜೆಪಿ ಮತ ನೀಡುವ ಮೂಲಕ ರಾಜ್ಯದಲ್ಲಿ ರಾಮ ರಾಜ್ಯ ಸ್ಥಾಪನೆಗೆ ಅಡಿಪಾಯ ಹಾಕುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ...
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ಭಾಲ್ಕಿ: ಬಿಜೆಪಿ ಮತ ನೀಡುವ ಮೂಲಕ ರಾಜ್ಯದಲ್ಲಿ ರಾಮ ರಾಜ್ಯ ಸ್ಥಾಪನೆಗೆ ಅಡಿಪಾಯ ಹಾಕುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸೋಮವಾರ ಕರೆ ನೀಡಿದ್ದಾರೆ.
ಇಂದು ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮಾತಮಾಡಿದ ಯೋಗಿ, ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಅಧಿಕಾರದಿಂದ ಕಿತ್ತು ಹಾಕಲು ಹಲವು ಕಾರಣಗಳಿವೆ. ಸಿದ್ದರಾಮಯ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿದ್ದು, ನೀವು ಈ ಬಾರಿ ಬಿಜೆಪಿಗೆ ಮತ ಹಾಕಿದರೆ ನಿಮ್ಮ ಹಣ ಮತ್ತೆ ವಾಪಸ್ ಬರಲಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಛತ್ರಪತಿ ಶಿವಾಜಿಯ ಪ್ರತಿಮೆ ಸ್ಥಾಪನೆ ವಿರೋಧ ವ್ಯಕ್ತಪಡಿಸುತ್ತಾರೆ. ಆದರೆ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ಯಾವುದೇ ವಿರೋಧ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com