ರಾಜಕೀಯ
ಪ್ರಬಲ ನಾಯಕತ್ವ ನೀಡುವಲ್ಲಿ ಕಾಂಗ್ರೆಸ್ ವಿಫಲ: ಶಿವರಾಜ್ ಚೌವ್ಹಾಣ್
ಪ್ರಬಲ ನಾಯಕತ್ವ ನೀಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ರಾಹುಲ್ ಗಾಂಧಿಯನ್ನು ಯಾರು ಗಂಭೀರವಾಗಿ ಪರಿಗಣಿಸುವುದಿಲ್ಲ ...
ಹುಬ್ಬಳ್ಳಿ: ಪ್ರಬಲ ನಾಯಕತ್ವ ನೀಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ರಾಹುಲ್ ಗಾಂಧಿಯನ್ನು ಯಾರು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಬುಧವಾರ ವ್ಯಂಗ್ಯವಾಡಿದ್ದಾರೆ.
ಇಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮಧ್ಯ ಪ್ರದೇಶ ಸಿಎಂ, ಕಾಂಗ್ರೆಸ್ ನಾಯಕತ್ವವನ್ನು ನೋಡಿದರೆ ಮತ್ತು ರಾಹುಲ್ ಗಾಂಧಿ ಪ್ರಧಾನಿಯಾಗಲು ಸಿದ್ಧ ಎನ್ನುವುದು ನೋಡಿದರೆ ನಿಮಗೆ ತಮಾಷೆ ಅನಿಸುತ್ತದೆ ಎಂದರು.
ರಾಹುಲ್ ಗಾಂಧಿಯನ್ನು ಯಾರೂ ಗಂಭೀರವಾಗಿ ಪರಿಗಣಿಸಿಲ್ಲ. ಆದರೂ ಅವರು ಪ್ರಧಾನಿಯಾಗುವ ಕನಸು ಕಾಣುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ನಿನ್ನೆಯಷ್ಟೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು 2019ರಲ್ಲಿ ಕಾಂಗ್ರೆಸ್ ಬಹುಮತ ಪಡೆದರೆ ತಾವು ಪ್ರಧಾನಿಯಾಗಲು ಸಿದ್ಧ ಎಂದು ಹೇಳಿದ್ದರು.