ಆದರೆ ಇದಕ್ಕೆ ತದ್ವಿರುದ್ಧ ಎಂಬಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರ ಸ್ವಾಮಿ ಅವರು, ಜೆಡಿಎಸ್ ಪೂರ್ಣಬಲದ ಮೇಲೆ ಅಧಿಕಾರಕ್ಕೇರಲಿದೆ. ತಾವು ಯಾವುದೇ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಮೈತ್ರಿ ಸರ್ಕಾರದಲ್ಲಿ ತಾವು ಸಿಎಂ ಆಗುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಬೆಳವಣಿಗೆಳ ಬೆನ್ನಲ್ಲೇ ಗೇರ್ ಬದಲಿಸಿರುವ ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ವಿರುದ್ಧ ಟೀಕಾ ಪ್ರಹಾರವನ್ನು ಆರಂಭಿಸಿವೆ. ಈ ಹಿಂದೆ ಜೆಡಿಎಸ್ ವರಿಷ್ಠರನ್ನು ಹಾಡಿಹೊಗಳಿದ್ದ ಪ್ರಧಾನಿ ಮೋದಿ, ಕೆಂಗೇರಿಯಲ್ಲಿ ನಡೆದ ಪ್ರಚಾರದಲ್ಲಿ ಜೆಡಿಎಸ್ ಗೆ ಮತ ನೀಡಿದರೆ ಕಾಂಗ್ರೆಸ್ ಗೆ ಮತ ನೀಡಿದಂತೆ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದರು. ಅಲ್ಲದೆ ತಾವು ಜೆಡಿಎಸ್ ನೊಂದಿಗೆ ಸೇರಿ ಸರ್ಕಾರ ರಚನೆ ಮಾಡುವುದಿಲ್ಲ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿದ್ದರು.