ಕುಮಾರಸ್ವಾಮಿ ಅವರು ಇಂದು ಮಾಧ್ಯಮ ಸಂವಾದ ನಡೆಸಬೇಕಿತ್ತು. ಆದರೆ, ಅನಾರೋಗ್ಯದ ಹಿನ್ನಲೆಯಲ್ಲಿ ಕಾರ್ಯಕ್ರಮ ರದ್ದು ಪಡಿಸಲಾಗಿದೆ. ಬುಧವಾರ, ಶಾಂತಿನಗರ ವಿಧಾನಸಭಾಕ್ಷೇತ್ರದಲ್ಲಿ ಪಟಾಕಿ ಹೊಗೆಯಿಂದ ಕುಮಾರಸ್ವಾಮಿಯವರಿಗೆ ಅಲರ್ಜಿಯಾಗಿದ್ದು, ಅತಿಯಾದ ಓಡಾಟದಿಂದ ಸುಸ್ತಾದ ಪರಿಣಾಮ ಈಗ ಜ್ವರದಿಂದ ಬಳಲುತ್ತಿದ್ದಾರೆಂದು ಜೆಡಿಎಸ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.