ರಾಜ್ಯ ವಿಧಾನಸಭೆ ಚುನಾವಣೆಗೆ ಕೇವಲ 24 ಗಂಟೆಗಳ ಸಮಯವಿದ್ದು, ಈಗಾಗಲೇ ಬಹಿರಂಗ ಪ್ರಚಾರ ಕೂಡ ಅಂತ್ಯವಾಗಿದೆ. ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಪೂರ್ಣಗೊಳಿಸಿಕೊಂಡಿದ್ದು, ಇದರ ನಡುವೆಯೇ ಬಿಜೆಪಿ ವಲಯದಲ್ಲೊಂದು ಸಂಚಲನಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಹಾಲಿ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದೇ ಆದರೆ ಯಡಿಯೂರಪ್ಪ ಸಿಎಂ ಆಗಲಿದ್ದಾರೆ. ಅಂತೆಯೇ ಜನಾರ್ಧನ ರೆಡ್ಡಿ ಆಪ್ತರೊಬ್ಬರು ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.