ಬೆಂಗಳೂರು: ಅಪಾರ್ಟ್ವೆುಂಟ್ವೊಂದರಲ್ಲಿ ಸುಮಾರು 10 ಸಾವಿರ ಮತದಾರರ ಗುರುತಿನ ಚೀಟಿಗಳ ಪತ್ತೆಯಾದ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಟ್ರಂಕ್ ನಲ್ಲಿ 95 ಲಕ್ಷ ರುಪಾಯಿ ಹಣ ಪತ್ತೆಯಾದ ಹಿನ್ನೆಯಲ್ಲಿ ಆ ಕ್ಷೇತ್ರದ ಚುನಾವಣೆಯನ್ನು ಮೇ ತಿಂಗಳ 28ಕ್ಕೆ ಮುಂದೂಡಲಾಗಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ತಿಳಿಸಿದ್ದಾರೆ.
ನಾಳೆ ರಾಜ್ಯದ 222 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಆದರೆ ಆರ್ .ಆರ್.ನಗರ ಕ್ಷೇತ್ರದ ಚುನಾವಣೆ ಮೇ28ರಂದು ನಡೆಯಲಿದ್ದು, ಮೇ 31ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಸಂಜೀವ್ ಕುಮಾರ್ ಹೇಳಿದ್ದಾರೆ.
ವೋಟರ್ ಐಡಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಮುನಿರತ್ನ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಜಾಲಹಳ್ಳಿಯ ಎಸ್ ಎಲ್ ವಿ ಅಪಾರ್ಟ್ವೆುಂಟ್ ನಲ್ಲಿ 9746 ಮತದಾರರ ಗುರುತಿನ ಚೀಟಿ, ಹಣ, ಐದು ಲ್ಯಾಪ್ ಟಾಪ್, ಒಂದು ಪ್ರಿಂಟರ್ ಅನ್ನು ಚುನಾವಣಾ ಅಧಿಕಾರಿಗಳು ಮಂಗಳವಾರ ಜಪ್ತಿ ಮಾಡಿದ್ದಾರೆ.