ಪ್ರಧಾನಿ ಮೋದಿ ಅವರು ನಡೆಸಿದ ರ್ಯಾಲಿಗಳಿಂದ ಬಿಜೆಪಿ ಕೇಡರ್ ನ ಆತ್ಮ ವಿಶ್ವಾಸ ಹೆಚ್ಚಿದೆ, ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರನ್ನು ಮೈಸೂರಿನ ವರುಣಾ ಕ್ಷೇತ್ರದಿಂದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿರುದ್ಧ ಕಣಕ್ಕಿಳಿಸದೇ ಇದ್ದದ್ದು, ಹಳೇ ಮೈಸೂರು ಭಾಗದಲ್ಲಿ ಪಕ್ಷದ ಕಾರ್ಯಕರ್ತರ ತೀವ್ರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ನಿರ್ಧಾರದಿಂದಾಗಿ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಪ್ರಚಾರದಲ್ಲಿ ತನ್ನು ಬಿರುಸು ಕಳೆದುಕೊಳ್ಳಲು ಕಾರಣವಾಯಿತು.