ಮಂಡ್ಯದ ಕೆ.ಆರ್ ರಸ್ತೆಯ ಪಿಎಲ್ಡಿ ಬ್ಯಾಂಕ್ ಮತಗಟ್ಟೆಯಲ್ಲಿ ರಮ್ಯಾ ಅವರು ಮತದಾನ ಮಾಡಬೇಕಾಗಿತ್ತು. ಆದರೆ ಇದೀಗ ಅವರು ಮತದಾನ ಮಾಡದೆ ದೂರು ಉಳಿದಿದ್ದರಿಂದ ಜನ ಸಾಮಾಜಿಕ ಜಾಲತಾಣಗಳಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ವೋಟು ಮಾಡದವರಿಗೆ ರಾಜಕೀಯ ಮಾತಾನಾಡುವ ನೈತಿಕತೆ ಎಲ್ಲಿದೆ ಎಂದು ಟ್ವೀಟಿಗರು ತರಾಟೆಗೆ ತೆಗೆದುಕೊಂಡಿದ್ದು, 'ನಂಬರ್ ಒನ್ ಸಿಟಿಜನ್' ಅಂತ ಲೇವಡಿ ಮಾಡಿದ್ದಾರೆ. ರಮ್ಯಾ ಮತ್ತು ಬಹುಭಾಷಾ ನಟ ಪ್ರಕಾಶ್ ರೈ ಅವರು ಪೃಧಾನಿ ಮೋದಿ ಬಗ್ಗೆ ಮಾತನಾಡುತ್ತಾ ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.