ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಶನಿವಾರ ಮುಕ್ತಾಯಗೊಂಡಿತ್ತು. ಮತದಾನ ಪೂರ್ಣಗೊಂಡ ಹಿನ್ನಲೆಯಲ್ಲಿ ಹಲವು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆಗಳು ನಡೆಸಿದ್ದು, ಕುತೂಹಲಕಾರಿ ಫಲಿತಾಂಶಗಳ ಕುರಿತು ಸುದ್ದಿ ಪ್ರಕಟಿಸುತ್ತಿವೆ. ಚುನಾವಣೋತ್ತರ ಫಲಿತಾಂಶಗಳು ಕುರಿತು ರಾಜ್ಯದಲ್ಲಿ ಒಂದೆಡೆ ಚರ್ಚೆ ನಡೆಯುತ್ತಿದ್ದರೆ, ಮತ್ತೊಂದೆಡೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದಿದ್ದೇ ಆದರೆ, ಉಪ ಮುಖ್ಯಮಂತ್ರಿ ಯಾರಾಗುತ್ತಾರೆಂಬುದರ ಕುರಿತೂ ಕೂಡ ಚರ್ಚೆಗಳು ಆರಂಭವಾಗಿವೆ.