ಉಳಿದಂತೆ ಮಳ್ಳವಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅನ್ನದಾನಿ, ಮದ್ದೂರು ಕ್ಷೇತ್ರದ ತಮ್ಮಣ್ಣ, ಮೇಲುಕೋಟೆಯಲ್ಲಿ ಪುಟ್ಟರಾಜು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಮಂಡ್ಯ ಪಟ್ಟಣದಲ್ಲೂ ಜೆಡಿಎಸ್ ಜಯಭೇರಿ ಭಾರಿಸಿದ್ದು, ಅಂಬರೀಶ್ ಅನುಪಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಹಿನ್ನಡೆಯನ್ನುಂಟು ಮಾಡಿದೆ. ಮಂಡ್ಯ ಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಎಂ ಶ್ರೀನಿವಾಸ್ ಅವರು ಜಯಭೇರಿ ಭಾರಿಸಿದ್ದು, ಕಾಂಗ್ರೆಸ್ ಪಕ್ಷದ ರವೀಂದ್ರ ಗಣಿಗ ಸೋಲು ಕಂಡಿದ್ದಾರೆ.