ದಕ್ಷಿಣ ಕನ್ನಡ: ಇವಿಎಂ ಯಂತ್ರದ ವಿರುದ್ಧ 7 ಕಾಂಗ್ರೆಸ್ ಅಭ್ಯರ್ಥಿಗಳ ದೂರು?

ದಕ್ಷಿಣ ಕನ್ನಡ ಜಿಲ್ಲೆಯ 7 ವಿಧಾನಸಭೆ ಕ್ಷೇತ್ರಗಳಲ್ಲಿ ಪಕ್ಷ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಮತಯಂತ್ರಗಳ ವಿರುದ್ಧ ದೂರು ದಾಖಲಿಸಲು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 7 ವಿಧಾನಸಭೆ ಕ್ಷೇತ್ರಗಳಲ್ಲಿ ಪಕ್ಷ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ  ಮತಯಂತ್ರಗಳ ವಿರುದ್ಧ ದೂರು ದಾಖಲಿಸಲು ಕಾಂಗ್ರೆಸ್ ಅಭ್ಯರ್ಥಿಗಳು ನಿರ್ಧರಿಸಿದ್ದಾರೆ.
ಎಲೆಕ್ಟ್ರಾನಿಕ್ ಮತಯಂತ್ರಗಳ ಕಾರ್ಯ ನಿರ್ವಹಣೆಯ ಬಗ್ಗೆ ಸಂಶಯವಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ.
ಈ ಸಂಬಂಧ ಬುಧವಾರ ಜಿಲ್ಲಾ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ-ಜೆ ಆರ್ ಲೋಬೋ, ಮಂಗಳೂರು ಉತ್ತರ- ಮೊಯುದ್ದೀನ್ ಬಾವಾ,  ಬಂಟ್ವಾಳ-ರಮಾನಾಥ ರೈ, ಪುತ್ತೂರು-ಶಕುಂತಲಾ ಶೆಟ್ಟಿ,  ಮೂಡಬಿದ್ರಿ- ಅಭಯಚಂದ್ರ ಜೈನ್, ಬೆಳ್ತಂಗಡಿ- ವಸಂತ ಬಂಗೇರಾ ಹಾಗೂ ಸುಳ್ಯದ ಡಾ. ಬಿ. ರಘು ಆಕ್ಷೇಪಣೆ ಸಲ್ಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com