ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 7 ವಿಧಾನಸಭೆ ಕ್ಷೇತ್ರಗಳಲ್ಲಿ ಪಕ್ಷ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಮತಯಂತ್ರಗಳ ವಿರುದ್ಧ ದೂರು ದಾಖಲಿಸಲು ಕಾಂಗ್ರೆಸ್ ಅಭ್ಯರ್ಥಿಗಳು ನಿರ್ಧರಿಸಿದ್ದಾರೆ.
ಎಲೆಕ್ಟ್ರಾನಿಕ್ ಮತಯಂತ್ರಗಳ ಕಾರ್ಯ ನಿರ್ವಹಣೆಯ ಬಗ್ಗೆ ಸಂಶಯವಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ.
ಈ ಸಂಬಂಧ ಬುಧವಾರ ಜಿಲ್ಲಾ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ-ಜೆ ಆರ್ ಲೋಬೋ, ಮಂಗಳೂರು ಉತ್ತರ- ಮೊಯುದ್ದೀನ್ ಬಾವಾ, ಬಂಟ್ವಾಳ-ರಮಾನಾಥ ರೈ, ಪುತ್ತೂರು-ಶಕುಂತಲಾ ಶೆಟ್ಟಿ, ಮೂಡಬಿದ್ರಿ- ಅಭಯಚಂದ್ರ ಜೈನ್, ಬೆಳ್ತಂಗಡಿ- ವಸಂತ ಬಂಗೇರಾ ಹಾಗೂ ಸುಳ್ಯದ ಡಾ. ಬಿ. ರಘು ಆಕ್ಷೇಪಣೆ ಸಲ್ಲಿಸಿದ್ದಾರೆ.