ದಕ್ಷಿಣ ಕನ್ನಡ: ಇವಿಎಂ ಯಂತ್ರದ ವಿರುದ್ಧ 7 ಕಾಂಗ್ರೆಸ್ ಅಭ್ಯರ್ಥಿಗಳ ದೂರು?

ದಕ್ಷಿಣ ಕನ್ನಡ ಜಿಲ್ಲೆಯ 7 ವಿಧಾನಸಭೆ ಕ್ಷೇತ್ರಗಳಲ್ಲಿ ಪಕ್ಷ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಮತಯಂತ್ರಗಳ ವಿರುದ್ಧ ದೂರು ದಾಖಲಿಸಲು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 7 ವಿಧಾನಸಭೆ ಕ್ಷೇತ್ರಗಳಲ್ಲಿ ಪಕ್ಷ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ  ಮತಯಂತ್ರಗಳ ವಿರುದ್ಧ ದೂರು ದಾಖಲಿಸಲು ಕಾಂಗ್ರೆಸ್ ಅಭ್ಯರ್ಥಿಗಳು ನಿರ್ಧರಿಸಿದ್ದಾರೆ.
ಎಲೆಕ್ಟ್ರಾನಿಕ್ ಮತಯಂತ್ರಗಳ ಕಾರ್ಯ ನಿರ್ವಹಣೆಯ ಬಗ್ಗೆ ಸಂಶಯವಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ.
ಈ ಸಂಬಂಧ ಬುಧವಾರ ಜಿಲ್ಲಾ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ-ಜೆ ಆರ್ ಲೋಬೋ, ಮಂಗಳೂರು ಉತ್ತರ- ಮೊಯುದ್ದೀನ್ ಬಾವಾ,  ಬಂಟ್ವಾಳ-ರಮಾನಾಥ ರೈ, ಪುತ್ತೂರು-ಶಕುಂತಲಾ ಶೆಟ್ಟಿ,  ಮೂಡಬಿದ್ರಿ- ಅಭಯಚಂದ್ರ ಜೈನ್, ಬೆಳ್ತಂಗಡಿ- ವಸಂತ ಬಂಗೇರಾ ಹಾಗೂ ಸುಳ್ಯದ ಡಾ. ಬಿ. ರಘು ಆಕ್ಷೇಪಣೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com