ಪಿ.ಚಿದಂಬಂರಂ
ಪಿ.ಚಿದಂಬಂರಂ

ಸರ್ಕಾರ ರಚನೆಗೆ ಬಿಜೆಪಿಗೆ ಆಹ್ವಾನ: ರಾಜ್ಯಪಾಲರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಲು ಕಾಂಗ್ರೆಸ್ ತೀರ್ಮಾನ

ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಬಿ.ಎಸ್.ಯಡಿಯೂರಪ್ಪ ಅವರನ್ನು ಸರ್ಕಾರ ರಚಿಸುವಂತೆ ಆಹ್ವಾನಿಸಿದ ಬಳಿಕ ಕಾಂಗ್ರೆಸ್ ರಾಜ್ಯಪಾಲರ ನಿರ್ಣಯ....
ನವದೆಹಲಿ: ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಬಿ.ಎಸ್.ಯಡಿಯೂರಪ್ಪ ಅವರನ್ನು ಸರ್ಕಾರ ರಚಿಸುವಂತೆ ಆಹ್ವಾನಿಸಿದ ಬಳಿಕ ಕಾಂಗ್ರೆಸ್ ರಾಜ್ಯಪಾಲರ ನಿರ್ಣಯವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲು ತೀರ್ಮಾನಿಸಿದೆ.
ಬಹುಮತ ಇದ್ದರೂ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಸರ್ಕಾರ ರಚನೆಗೆ ಆಹ್ವಾನ ನೀಡದಿರುವ ರಾಜ್ಯಪಾಲರ ಕ್ರಮದ ವಿರುದ್ಧ ಭಾರತ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಬಳಿ ತೆರಳಿ ಪ್ರಶ್ನಿಸುವ ತೀರ್ಮಾನ ಕಾಂಗ್ರೆಸ್ ಪಕ್ಷ  ಕೈಗೊಂಡಿದೆ ಎಂದು ಪಕ್ಷದ ಹಿರಿಯ ಮುಖಂಡ ಪಿ.ಚಿದಂಬಂರಂ,ಹೇಳಿದ್ದಾರೆ.
ಚಿದಂಬರಂ ಹಾಗೂ ಕಪಿಲ್ ಸಿಬಲ್ ಮತ್ತು ಸರ್ಜೆವಾಲಾ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಮಾಹಿತಿ ನೀಡಿದ್ದಾರೆ.
ರಾಜ್ಯಪಾಲರ ಈ ನಡೆಯು ಬಿಜೆಪಿಗೆ ಶಾಸಕರನ್ನು ಹಣ ಕೊಟ್ಟು ಖರೀದಿ ಮಾಡಲು ಅವಕಾಶ ನೀಡಿದಂತಾಗಿದೆ ಎಂದು ಪಿ.ಚಿದಂಬರಂ ಆರೋಪಿಸಿದ್ದಾರೆ.
ರಾಜ್ಯಪಾಲ ವಜುಭಾಯಿ ವಾಲಾ ಅವರು ವಿಧಾನಸಭೆ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ)ಕ್ಕೆ ಸರ್ಕಾರ ರಚಿಸಲು ಇಂದು ಸಂಜೆ  ಅಧಿಕೃತ ಆಹ್ವಾನ ನಿಡಿದ್ದರು

Related Stories

No stories found.

Advertisement

X
Kannada Prabha
www.kannadaprabha.com