ಹೈದರಾಬಾದ್: ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶಗಳು ಹಲವು ಬದಲಾವಣೆಗಳಿಗೆ ಕಾರಣವಾಗಿದೆ. ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದರೂ ಬಿಜೆಪಿಗೆ ಜನತೆ ಹೆಚ್ಚು ಸ್ಥಾನಗಳನ್ನು ನೀಡಿರುವುದು ನೆರೆಯ ರಾಜ್ಯ ತೆಲಂಗಾಣಕ್ಕೆ ಕೊಂಚ ಆತಂಕ ಉಂಟು ಮಾಡಿದ್ದರು ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಜೆಡಿಎಸ್ ಅನ್ನು ಬೆಂಬಲಿಸಿರುವುದು ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸೇತ್ತರ ಹಾಗೂ ಬಿಜೆಪಿಯೇತ್ತರ ತೃತೀಯ ರಂಗ ರಚನೆಗೆ ಮುಂದಾಗಿದ್ದ ತೆಲಂಗಾಣ ಮುಖ್ಯಮಂತ್ರಿ ಟಿಆರ್ಎಸ್ ಚಂದ್ರಶೇಖರ್ ರಾವ್ ಅವರ ಯೋಜನೆಗೆ ತೊಡಕಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.