ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ ಕಾರಣ: ಸಿಎಂ ವಿರುದ್ಧ ಕೆಬಿ ಕೋಳಿವಾಡ ವಾಗ್ದಾಳಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣ ಎಂದು ಮಾಜಿ ಸ್ಪೀಕರ್ ಕೆಬಿ ಕೋಳಿವಾಡ ವಾಗ್ದಾಳಿ ನಡೆಸಿದ್ದಾರೆ...
ಸಿದ್ದರಾಮಯ್ಯ-ಕೆಬಿ ಕೋಳಿವಾಡ
ಸಿದ್ದರಾಮಯ್ಯ-ಕೆಬಿ ಕೋಳಿವಾಡ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣ ಎಂದು ಮಾಜಿ ಸ್ಪೀಕರ್ ಕೆಬಿ ಕೋಳಿವಾಡ ವಾಗ್ದಾಳಿ ನಡೆಸಿದ್ದಾರೆ. 
ಸಿದ್ದರಾಮಯ್ಯನಲ್ಲಿ ಕಾಂಗ್ರೆಸ್ ರಕ್ತ ಇಲ್ಲ. ನನ್ನ ವಿರುದ್ಧ ಗೆಲುವು ಸಾಧಿಸಿರುವ ಕೆಪಿಜೆಪಿ ಅಭ್ಯರ್ಥಿಯನ್ನು ಪಕ್ಷಕ್ಕೆ ಸೇರಿಕೊಳ್ಳಲು ಮುಂದಾಗುತ್ತಾರೆ. ಇಂತಹ ಸಿದ್ದರಾಮಯ್ಯನಿಂದ ಕಾಂಗ್ರೆಸ್ ಏಳಿಗೆ ಸಾಧ್ಯವಿಲ್ಲ ಎಂದು ಕೋಳಿವಾಡ ಸಿದ್ದು ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. 
ಸಿದ್ದರಾಮಯ್ಯ ನನಗಿಂತ 13 ವರ್ಷದ ಬಚ್ಚ. ನಾನು ಸ್ಪೀಕರ್ ಆಗಿದ್ದಾಗ ಸಾಕಷ್ಟು ಸಲ ಕಾಂಗ್ರೆಸ್ ಪರ ಕೆಲಸ ಮಾಡಿದ್ದೇವೆ. ನಾನು ಸೋತಿದ್ದರು ಹಿನ್ನೆಲೆಯಲ್ಲಿ ಪಕ್ಷ ಬಿಡುವ ಮಾತೇ ಇಲ್ಲ. 1996ರಿಂದ ಕಾಂಗ್ರೆಸ್ ನಲ್ಲಿ ನಾನಿದ್ದೇನೆ. ಪಕ್ಷ ತೊರೆಯುವ ಮಾತಿಲ್ಲ ಎಂದು ಕೋಳಿವಾಡ ಹೇಳಿದ್ದಾರೆ. 
ಇನ್ನು ಲೋಕಸಭಾ ಚುನಾವಣೆಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಹೋಗಬಾರದು ಬದಲಿಗೆ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ನೇತೃತ್ವದಲ್ಲಿ ಹೋಗಬೇಕು ಎಂದು ಕೋಳಿವಾಡ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com