ಇದರಂತೆ ಬಿಜೆಪಿ ಇಂದು ಪಕ್ಷದ ಸಭೆಯನ್ನು ನಗರದಲ್ಲಿ ಆಯೋಜನೆ ಮಾಡಿದ್ದು, ಇಂದು ಬೆಳಿಗ್ಗೆ 11 ಗಂಟೆಗೆ ಸಭೆ ನಡೆಯಲಿದೆ. ಸಭೆಯಲ್ಲಿಕ ಬಿಜೆಪಿ ಉನ್ನತ ನಾಯಕರು ಭಾಗಿಯಾಗಲಿದ್ದು, ಚುನಾವಣಾ ಫಲಿತಾಂಶ ಕುರಿತು ಚರ್ಚೆ ನಡೆಸಲಿದ್ದಾರೆ. ರಾಜ್ಯ ರಾಜಕೀಯದಲ್ಲಿ ಆಗುತ್ತಿರುವ ಬೆಳವಣಿಗೆಗಳು ಹಾಗೂ ಆಗುಹೋಗುಗಳನ್ನು ಪರಿಶೀಲಿಸಲು ರಾಜ್ಯ ಬಿಜೆಪಿ ಪರಿವೀಕ್ಷಕರಾಗಿ ಎನ್'ಡಿಎ ಪಕ್ಷ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಅವರನ್ನು ನೇಮಕ ಮಾಡಿದೆ.