ನವದೆಹಲಿ: ಕರ್ನಾಟಕದಲ್ಲಿ ಕುದುರೆ ವ್ಯಾಪಾರ ನಡೆಸಲು ಪ್ರಧಾನಿ ಮೋದಿ ಬಿಜೆಪಿ ನಾಯಕರಿಗೆ ಪ್ರಚೋದನೆ ನಿಡುತ್ತಿದ್ದಾರೆ ಎನ್ನುವ ಕರ್ನಾಟಕ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ ಶುದ್ದ ಸುಳ್ಳು, ಇದೊಂದು ಆಧಾರರಹಿತ, ಬೇಜವಾಬ್ದಾರಿ ಹೇಳಿಕೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.