ಬೆಂಗಳೂರು: ಭಾರತೀಯ ಜನತಾ ಪಕ್ಷದ ಆರು ಮಂದಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಬಿಜೆಪಿ ಜತೆ ಸಂಪರ್ಕದಲ್ಲಿದ್ದಾರೆ ಎಂಬುದು ಸುಳ್ಳು ಸುದ್ದಿ ಎಂದು ಸ್ಪಷ್ಟ ಪಡಿಸಿದ್ದಾರೆ.
ನಾವೆಲ್ಲ ಜತೆಯಾಗಿದ್ದೇವೆ. ನಮ್ಮ ಶಾಸಕರು ಯಾರೂ ಬಿಜೆಪಿ ಜತೆ ಸಂಪರ್ಕದಲ್ಲಿಲ್ಲ. ಬದಲಿಗೆ ಬಿಜೆಪಿಯ ಆರು ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಸುದ್ದಿ ಸಂಸ್ಥೆ ಟ್ಟೀಟ್ ಮಾಡಿದೆ.
ಇನ್ನೂ ಕಾಂಗ್ರೆಸ್ ನ 78 ಶಾಸಕರ ಪೈಕಿ ಪಕ್ಷದ ಶಾಸಕಾಂಗ ಸಭೆಗೆ ಕೇವಲ 66 ಶಾಸಕರು ಮಾತ್ರ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.