ರಾಜ್ಯ ಸರ್ಕಾರದಿಂದ ಬಿಜೆಪಿ ನಾಯಕರ ಫೋನ್ ಕದ್ದಾಲಿಕೆ: ಕೇಂದ್ರಕ್ಕೆ ದೂರು

ರಾಜ್ಯ ಸರ್ಕಾರ ಅಧಿಕಾರ ದುರುಪಪಡಿಸಿಕೊಂಡು ತಮ್ಮ ದೂರವಾಣಿ ಕದ್ದಾಲಿಕೆ ಮಾಡುತ್ತಿದೆ ಎಂದು ಆರೋಪಿಸಿ....
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ
ಬೆಂಗಳೂರು: ರಾಜ್ಯ ಸರ್ಕಾರ ಅಧಿಕಾರ ದುರುಪಪಡಿಸಿಕೊಂಡು ತಮ್ಮ ದೂರವಾಣಿ ಕದ್ದಾಲಿಕೆ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿಯ ಮೂವರು ಸಂಸದರು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.
ರಾಜ್ಯ ಸರ್ಕಾರ ದೂರವಾಣಿ ಕದ್ದಾಲಿಸುತ್ತಿರುವುದು ಸಂವಿಧಾನದ ಹಕ್ಕು ಉಲ್ಲಂಘನೆ ಎಂದು ಸಂಸದರಾದ ಶೋಭಾ ಕರಂದ್ಲಾಜೆ, ಪಿ.ಸಿ. ಮೋಹನ್‌ ಹಾಗೂ ಜಿ.ಎಂ. ಸಿದ್ದೇಶ್ವರ್‌ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಇನ್ನು ದೂರವಾಣಿ ಕದ್ದಾಲಿಕೆ ಸಂಬಂಧ ಲೋಕಸಭಾ ಸ್ಪೀಕರ್‌ ಅವರಿಗೂ ದೂರು ಸಲ್ಲಿಸಿದ್ದೇವೆ ಎಂದು ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಮತ್ತೆ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು, ರಾಜಕೀಯ ಚದುರಂಗದಾಟ ಆರಂಭವಾಗಿದೆ. 38 ಸ್ಥಾನ ಪಡೆದು ಮೂರನೇ ಸ್ಥಾನದಲ್ಲಿರುವ ಜೆಡಿಎಸ್ ಗೆ 78 ಸ್ಥಾನ ಗೆದ್ದ ಕಾಂಗ್ರೆಸ್ ಬೆಂಬಲ ಸೂಚಿಸಿದೆ. ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಬಿಜೆಪಿ 104 ಸ್ಥಾನಗಳೊಂದಿಗೆ ಸರ್ಕಾರ ರಚನೆಗೆ ತೀವ್ರ ಸರ್ಕಸ್ ನಡೆಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com