ಬೆಂಗಳೂರು: ಅತಂತ್ರ ವಿಧಾನಸಭೆ ನಿರ್ಮಾಣವಾಗಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿರುವ ಮಧ್ಯೆಯೇ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಸದನದಲ್ಲಿ ಬಹುಮತ ಸಾಬೀತುಪಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮುಂದಿನ ಐದು ವರ್ಷಗಳ ಕಾಲ ಅಧಿಕಾರದಲ್ಲಿರುವುದಾಗಿ ಹೇಳಿದ್ದಾರೆ.