ಕುದುರೆ ವ್ಯಾಪಾರವೆಲ್ಲ ಎಚ್.ವಿಶ್ವನಾಥ್ ಅವರ ಬಳಿ ನಡೆಯುವುದಿಲ್ಲ. ನಾವು ಪಕ್ಷ ನಿಷ್ಠರು. ಅವಕಾಶವಾದಿಗಳಲ್ಲ. ನಮ್ಮ ತಂದೆಯನ್ನು ಸೆಳೆಯಲು ನನ್ನ ಮೂಲಕ ಪ್ರಯತ್ನ ನಡೆಸುತ್ತಿರುವವರು ಇದನ್ನೆಲ್ಲ ನಿಲ್ಲಿಸಿ. ಅಧಿಕಾರವಿಲ್ಲದಿದ್ದರೂ ಸರಿಯೇ, ಮತ ನೀಡಿದ ಜನರ ಪರ ಶಾಸಕನಾಗಿ ನಿಲ್ಲುವುದೇ ಸರಿ ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.