ವಿಧಾನಸಭೆ ಅತಂತ್ರ ಪರಿಸ್ಥಿತಿ ಎದುರಾದಾಗಿನಿಂದಲೂ ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಹಾಗೂ ಪ್ರತಾಪ್ ಗೌಡ ಅವರು ನಾಪತ್ತೆಯಾಗಿದ್ದರು. ಇಬ್ಬರೂ ಶಾಸಕರೂ ಸೋಮಶೇಖರ ರೆಡ್ಡಿಯವರೊಂದಿಗಿದ್ದು, ಬಿಜೆಪಿ ಕುದುರೆ ವ್ಯಾಪಾರ ಮಾಡಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಇದೀಗ ಇಬ್ಬರೂ ಶಾಸಕರೂ ವಿಧಾನಮಂಡಲಕ್ಕೆ ಆಗಮಿಸಿದ್ದು, ಎಲ್ಲಾ ಊಹಾಪೋಹಗಳಿಗೂ ತೆರೆ ಎಳೆದಂತಾಗಿದೆ.