ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇಬ್ಬರು ಶಾಸಕರನ್ನು ಬಿಟ್ಟು ಉಳಿದೆಲ್ಲಾ ಶಾಸಕರು ಸದನದಲ್ಲಿ ಹಾಜರಿದ್ದಾರೆ. ನಾಪತ್ತೆಯಾಗಿರುವ ಇಬ್ಬರೂ ಶಾಸಕರೂ ನಮ್ಮೊಂದಿಗೆ ಗೆದ್ದಿದ್ದಾರೆ. ನಮ್ಮ ಜೊತೆಗೇ ಇರಲಿದ್ದಾರೆ. ಅಷ್ಟು ಸುಲಭವಾಗಿ ಅಡ್ಡ ಮತದಾನ ಮಾಡಲು ಸಾಧ್ಯವಿಲ್ಲ. ಹಾಗೆ ಮಾಡಿದರೆ, ಜನರೇ ಅವರನ್ನು ಸುಮ್ಮನೆ ಬಿಡುವುದಿಲ್ಲ. ಇನ್ನೂ ಸಮಯವಿದೆ. ನಾಪತ್ತೆಯಾಗಿರುವ ಶಾಸಕರು ನಮಗೇ ಬೆಂಬಲ ನೀಡಲಿದ್ದಾರೆಂದು ಹೇಳಿದ್ದಾರೆ.