ನಾಡಿದ್ದು 22 ರಂದು ಬಿಜೆಪಿಯ ಸೋತ ಶಾಸಕರ ಸಭೆ: ಬಿ.ಎಸ್.ಯಡಿಯೂರಪ್ಪ

ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ...
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ
Updated on

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಚುನಾವಣೆಯಲ್ಲಿ ಸೋತ ಪಕ್ಷದ ಶಾಸಕರ ಜೊತೆ ಪರಾಮರ್ಶೆಗೆ ಮುಂದಾಗಿದ್ದಾರೆ.

ಈ ಸಂಬಂಧ ನಾಡಿದ್ದು ಮಂಗಳವಾರ ಸಂಜೆ 5 ಗಂಟೆಗೆ ಅವರು ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸಭೆ ಕರೆದಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ಚುನಾವಣೆಯಲ್ಲಿ ಹಲವು ಬಿಜೆಪಿ ಶಾಸಕರು ಕಡಿಮೆ ಅಂತರದಲ್ಲಿ ಸೋಲನುಭವಿಸಿದ್ದಾರೆ. ಅವರ ಸೋಲಿಗೆ ಕಾರಣವೇನು, ಯಾವ ಅಂಶಗಳು ಹಿನ್ನಡೆಯಾಯಿತು, ಸರ್ಕಾರ ರಚನೆ ಯತ್ನ ವಿಫಲವೇಕೆ ಆಯಿತು ಎಂಬಿತ್ಯಾದಿ ವಿಷಯಗಳ ಕುರಿತು ಚುನಾವಣೆಯಲ್ಲಿ ಸೋಲನ್ನು ಕಂಡ ಶಾಸಕರೊಂದಿಗೆ ಚರ್ಚೆ ನಡೆಸಲಿದ್ದೇನೆ ಎಂದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಗೆ ಮುಂದಾಗಿವೆ. ವಿಶ್ವಾಸಮತ ಯಾಚಿಸಿ ಸರ್ಕಾರ ಅಸ್ತಿತ್ವಕ್ಕೆ ಬಂದು ಮಂತ್ರಿಮಂಡಲ ರಚನೆಯಾದ ನಂತರ ಬಿಜೆಪಿಯ ಮುಂದಿನ ನಡೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com