ಆದರೆ ಬಿಎಸ್ ವೈ ಈ ನಿರ್ಧಾರದ ಹಿಂದೆ ಬಿಜೆಪಿ ಹೈಕಮಾಂಡ್ ನ ಖಡಕ್ ಸೂಚನೆಯೊಂದು ಕೆಲಸ ಮಾಡಿದೆ ಎಂದು ಹೇಳಲಾಗುತ್ತಿದೆ. ಹೌದು...104 ಸದಸ್ಯ ಬಲವುಳ್ಳ ಬಿಜೆಪಿ ಬಹುಮತ ಪಡೆಯಲು ಸಾಕಷ್ಟು ಕಸರತ್ತು ನಡೆಸಿತ್ತು. ಮಾಜಿ ಗಣಿಧಣಿ ಜನಾರ್ಧನ ರೆಡ್ಡಿ, ಬಿಎಸ್ ವೈ ಪುತ್ರ ವಿಜಯೇಂದ್ರ, ಬಿಎಸ್ ವೈ ಆಪ್ತ ಬಿಜೆ ಪುಟ್ಟಸ್ವಾಮಿ, ಶ್ರೀರಾಮುಲು ಅಷ್ಟೇ ಏಕೆ ಖುದ್ಧು ಬಿಎಸ್ ಯಡಿಯೂರಪ್ಪ ಅವರೂ ಕೂಡ ಕಾಂಗ್ರೆಸ್ ಶಾಸಕರಿಗೆ ಆಮಿಷವೊಡ್ಡಿದ್ದರು ಎಂಬ ಆರೋಪಗಳಿವೆ.