ನಿನ್ನೆ ನಡೆದ ವಿಶ್ವಾಸ ಮತ ಯಾಚನೆ ವೇಳೆ ಸಿಎಂ ಯಡಿಯೂರಪ್ಪ ಅವರು ಅಲ್ಬಮತದ ಕಾರಣ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಇದೀಗ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿದ್ದು, ಇದರ ಬೆನ್ನಲ್ಲೇ ಬಿಜೆಪಿಯ ಮೊಳಕಾಲ್ಮೂರು ಶಾಸಕ ಮತ್ತು ರೆಡ್ಡಿ ಆಪ್ತ ಬಿ ಶ್ರೀರಾಮುಲು, 'ತಪ್ಪಿಸಿಕೊಂಡಿದ್ದೇವೆ ಎಂದು ತಿಳಿಯಬೇಡಿ , ಪ್ರಬಲ ವಿರೋಧ ಪಕ್ಷವಾಗಿ ನಿಮ್ಮನ್ನು ಮಲಗಲು ಬಿಡುವುದಿಲ್ಲ' ಎಂದು ಗುಡುಗಿದ್ದಾರೆ.