ಹಂಗಾಮಿ ಸ್ಪೀಕರ್ ಹಾಗೂ ಬಿಜೆಪಿ ಶಾಸಕರ ಈ ನಡೆಗೆ ಇದೀಗ ಸಾಕಷ್ಟು ವಿರೋಧಗಳು ವ್ಯಕ್ತವಾಗತೊಡಗಿದ್ದು, ಸದನವನ್ನು ಸಭಾಪತಿಗಳು ಮುಂದೂಡುವ ಘೋಷಣೆ ಮಾಡಿದ ಬಳಿಕ ರಾಷ್ಟ್ರಗೀತೆ ನುಡಿಸಲು ಆರಂಭಿಸಲಾಯಿತು. ಆದರೆ, ಇದಕ್ಕೂ ಮುನ್ನವೇ ಬಿಜೆಪಿ ಶಾಸಕರು ಹಾಗೂ ಹಂಗಾಮಿ ಸ್ಪೀಕರ್ ಸಿ.ಜೆ.ಬೋಪಯ್ಯ ಎದ್ದು ಹೊರಟು ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆಂದು ತೀವ್ರವಾಗಿ ಕಿಡಿಕಾರುತ್ತಿದ್ದಾರೆ.