ಒಟ್ಟಾರೆ ರೂ.11 ಸಾವಿರ ಕೋಟಿಗಳನ್ನು ಚುನಾವಣಾ ಉದ್ದೇಶಕ್ಕೆ ಬಿಜೆಪಿ ತೆಗೆದಿರಿಸಿತ್ತು. ರೂ6,500 ಕೋಟಿ ಚುನಾವಣೆಗೆ ಖರ್ಚು ಮಾಡಿದರೆ, ಶಾಸಕರ ಖರೀದಿಗೆ ರೂ.4,500 ಕೋಟಿ ತೆಗೆದಿರಿಸಿದೆ. ಅಮಿತ್ ಶಾ, ಮೋದಿಯವರು ಈ ಅಕ್ರಮಗಳಿಗಾಗಿ ಕರ್ನಾಟಕದ ಜನರ ಕ್ಷಮೆಯಾಚಿಸಬೇಕು. ಆದರೆ, ಅವರಿಗೆ ದಪ್ಪ ಚರ್ಮವಿದೆ. ಶಾಸಕರ ಖರೀದಿಯಲ್ಲಿ ಅವರದ್ದು ಎತ್ತಿದ ಕೈ. ಬಲಾಬಲ ಪರೀಕ್ಷೆ ದಿನದಂದು ಇಬ್ಬರು ಕಾಂಗ್ರೆಸ್ ಶಾಸಕರು ಪೊಲೀಸರ ರಕ್ಷಣೆಯಲ್ಲಿ ಆಗಮಿಸಬೇಕಾಯಿತು ಎಂದು ದೂರಿದ್ದಾರೆ.