ರೈತರ ಸಾಲಮನ್ನಾ ವಿಚಾರದಲ್ಲಿ ಎಚ್ ಡಿಕೆ ಯೂ ಟರ್ನ್​: ಜಗದೀಶ್​ ಶೆಟ್ಟರ್

ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಮಾಡುತ್ತೇನೆ ಎಂದು ಭರವಸೆ ನೀಡಿದ್ದ ನಿಯೋಚಿತ
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್
Updated on
ಹುಬ್ಬಳ್ಳಿ: ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಮಾಡುತ್ತೇನೆ ಎಂದು ಭರವಸೆ ನೀಡಿದ್ದ ನಿಯೋಚಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈಗ ಉಲ್ಟಾ ಹೊಡೆದಿದ್ದಾರೆ ಎಂದು ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್,  ಕುಮಾರಸ್ವಾಮಿ ಈಗ ಬಹುಮತ ಬಂದಿದ್ದರೆ ರೈತರ ಸಾಲ ಮನ್ನಾ ಮಾಡುತ್ತಿದ್ದೆ ಎಂದು ಹೇಳುವ ಮೂಲಕ ಯೂಟರ್ನ್​ ಹೊಡೆದಿದ್ದಾರೆ. ಈ ಸರ್ಕಾರ ಬಹಳ ದಿನ ಉಳಿಯಲ್ಲ ಎಂದರು.
ರಾಜ್ಯದ ಜನರು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವನ್ನು ತಿರಸ್ಕರಿಸಿದ್ದು, ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಿಲ್ಲಾ ಎನ್ನುವ ಹಾಗೆ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ವರ್ತಿಸುತ್ತಿದ್ದಾರೆ ಎಂದು ಶೆಟ್ಟರ್ ಕಿಡಿಕಾರಿದರು. 
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದರೆ ಅವಳಿ ನಗರದ ಮಹಾನಗರ ಪಾಲಿಕೆಗೆ ಬರುವ 130 ಕೋಟಿ ಹಣ ಬಿಡುಗಡೆ ಮಾಡಿಸುತ್ತಿದ್ದೆವು. ಈಗಲೂ ನಾವು ಸರ್ಕಾರದ ಮೇಲೆ ಒತ್ತಡ ಹಾಕುತ್ತೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com