ಯಾರೂ ಅತೃಪ್ತಿ ಹೊಂದಿಲ್ಲ, ನಾವೆಲ್ಲರೂ ಒಟ್ಟಿಗೆ ಇದ್ದೇವೆ: ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಕೂಡ ಅಸಮಾಧಾನ ಅಥವಾ ಅತೃಪ್ತಿಗೊಂಡಿಲ್ಲ. ನಾವೆಲ್ಲರೂ ...
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್
Updated on

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಕೂಡ ಅಸಮಾಧಾನ ಅಥವಾ ಅತೃಪ್ತಿಗೊಂಡಿಲ್ಲ. ನಾವೆಲ್ಲರೂ ಒಟ್ಟಾಗಿ ಇದ್ದೇವೆ ಎಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ತಮಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡದ್ದಕ್ಕಾಗಿ ಡಿ.ಕೆ.ಸೋದರರು ಅಸಮಾಧಾನ ಹೊರಹಾಕಿದ್ದಾರೆ, ಈ ಕುರಿತು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯವರ ಬಳಿ ಪ್ರಸ್ತಾಪಿಸಲಿದ್ದಾರೆ ಎಂಬ ಸುದ್ದಿ ಇಂದು ಬೆಳಗ್ಗೆಯಿಂದ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದವು.

ಈ ಕುರಿತು ಸ್ಪಷ್ಟನೆ ನೀಡಿರುವ ಡಿ.ಕೆ.ಶಿವಕುಮಾರ್, ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಖುಷಿಯಲ್ಲಿ ನಾವಿದ್ದೇವೆ. ಈ ಸಂಭ್ರಮದ ಆಚರಣೆಯಲ್ಲಿ ಇಂದು ನಾವೆಲ್ಲರೂ ಇದ್ದೇವೆ. ಮುಖ್ಯಮಂತ್ರಿ ಹುದ್ದೆಗೆ ನಾನು ಆಕಾಂಕ್ಷಿ ಎಂದು ನಾನೆಂದೂ ಹೇಳಿಕೊಂಡಿಲ್ಲ. ಎಲ್ಲವೂ ಸರಿಯಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com