ಯಾರೂ ಅತೃಪ್ತಿ ಹೊಂದಿಲ್ಲ, ನಾವೆಲ್ಲರೂ ಒಟ್ಟಿಗೆ ಇದ್ದೇವೆ: ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಕೂಡ ಅಸಮಾಧಾನ ಅಥವಾ ಅತೃಪ್ತಿಗೊಂಡಿಲ್ಲ. ನಾವೆಲ್ಲರೂ ...
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಕೂಡ ಅಸಮಾಧಾನ ಅಥವಾ ಅತೃಪ್ತಿಗೊಂಡಿಲ್ಲ. ನಾವೆಲ್ಲರೂ ಒಟ್ಟಾಗಿ ಇದ್ದೇವೆ ಎಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ತಮಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡದ್ದಕ್ಕಾಗಿ ಡಿ.ಕೆ.ಸೋದರರು ಅಸಮಾಧಾನ ಹೊರಹಾಕಿದ್ದಾರೆ, ಈ ಕುರಿತು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯವರ ಬಳಿ ಪ್ರಸ್ತಾಪಿಸಲಿದ್ದಾರೆ ಎಂಬ ಸುದ್ದಿ ಇಂದು ಬೆಳಗ್ಗೆಯಿಂದ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದವು.

ಈ ಕುರಿತು ಸ್ಪಷ್ಟನೆ ನೀಡಿರುವ ಡಿ.ಕೆ.ಶಿವಕುಮಾರ್, ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಖುಷಿಯಲ್ಲಿ ನಾವಿದ್ದೇವೆ. ಈ ಸಂಭ್ರಮದ ಆಚರಣೆಯಲ್ಲಿ ಇಂದು ನಾವೆಲ್ಲರೂ ಇದ್ದೇವೆ. ಮುಖ್ಯಮಂತ್ರಿ ಹುದ್ದೆಗೆ ನಾನು ಆಕಾಂಕ್ಷಿ ಎಂದು ನಾನೆಂದೂ ಹೇಳಿಕೊಂಡಿಲ್ಲ. ಎಲ್ಲವೂ ಸರಿಯಾಗಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com