ನನಗೆ ಯಾವುದೇ ರೀತಿಯ ಆತಂಕವಿಲ್ಲ; ವಿಶ್ವಾಸಮತಯಾಚನೆ ಕುರಿತು ಹೆಚ್.ಡಿ. ಕುಮಾರಸ್ವಾಮಿ

ವಿಶ್ವಾಸಮತಯಾಚನೆ ಕುರಿತು ನನಗೆ ಯಾವುದೇ ರೀತಿಯ ಆತಂಕಗಳಿಲ್ಲ. ಬಹುಮತ ಸಾಬೀತುಪಡಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ...
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
Updated on
ಬೆಂಗಳೂರು: ವಿಶ್ವಾಸಮತಯಾಚನೆ ಕುರಿತು ನನಗೆ ಯಾವುದೇ ರೀತಿಯ ಆತಂಕಗಳಿಲ್ಲ. ಬಹುಮತ ಸಾಬೀತುಪಡಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ. 
ವಿಧಾನಸೌಧಕ್ಕೆ ಭೇಟಿ ನೀಡುವುದಕ್ಕೂ ಮುನ್ನ ಮಾಧ್ಯಮಗಳೊಂದಿಗೆಮಾತನಾಡಿರುವ ಅವರು, ನನಗೆ ಯಾವುದೇ ರೀತಿಯ ಆತಂಕವಿಲ್ಲ. ಬಹುಮತ ಸಾಬೀತುಪಡಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. 
ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಯವರು ಬಹುಮತ ಸಾಬೀತುಪಡಿಸುವ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಚರ್ಚೆ ವೇಳೆ ದೇವೇಗೌಡ ಅವರು ಮಹತ್ವದ ಸಲಹೆಗಳನ್ನು ನೀಡಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com