ಸಭಾಧ್ಯಕ್ಷರಿಗೆ ಗೌರವ ಸೂಚಿಸುವ ಸಲುವಾಗಿ ಅವಿರೋಧ ಆಯ್ಕೆ ಮಾಡಿದೆವು; ಬಿ.ಎಸ್.ಯಡಿಯೂರಪ್ಪ

ಸಭಾಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿರುವುದನ್ನು ನೋಡಿದ್ದೇವೆ. ನಿಮ್ಮಂತಹ ಹಿರಿಯ ಸಭಾಧ್ಯಕ್ಷರಿಗೆ ಗೌರವ ಸೂಚಿಸುವ ಸಲುವಾಗಿ ಅವಿರೋಧವಾಗಿ ಆಯ್ಕೆ ಮಾಡಿದೆವೆಂದು ವಿಧಾಸಭೆ ಸ್ಪೀಕರ್ ಆಗಿ ಆಯ್ಕೆಯಾಗಿರುವ ರಮೇಶ್ ಕುಮಾರ್...
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ
Updated on
ಬೆಂಗಳೂರು: ಸಭಾಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿರುವುದನ್ನು ನೋಡಿದ್ದೇವೆ. ನಿಮ್ಮಂತಹ ಹಿರಿಯ ಸಭಾಧ್ಯಕ್ಷರಿಗೆ ಗೌರವ ಸೂಚಿಸುವ ಸಲುವಾಗಿ ಅವಿರೋಧವಾಗಿ ಆಯ್ಕೆ ಮಾಡಿದೆವೆಂದು ವಿಧಾಸಭೆ ಸ್ಪೀಕರ್ ಆಗಿ ಆಯ್ಕೆಯಾಗಿರುವ ರಮೇಶ್ ಕುಮಾರ್ ಅವರ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. 
ವಿಧಾನಸಭೆಯಲ್ಲಿ ಮಾತನಾಡಿರುವಅವರು, 1994ರಿಂದ 1999ರವರೆಗೆ 5 ವರ್ಷಗಳ ಕಾಲ ಅತ್ಯಂತ ಯಶಸ್ವಿಯಾಗಿ ಸಭಾಧ್ಯಕ್ಷರಾಗಿ ನೀವು ಕಾರ್ಯನಿರ್ವಹಿಸಿದ್ದನ್ನು ನಾವು ನೋಡಿದ್ದೇವೆ. ನಿಮ್ಮಂತಹ ಹಿರಿಯರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕೆಂಬ ಕಾರಣಕ್ಕೆ ಹಾಗೂ ಗೌರವ ನೀಡಿರುವ ಸಲುವಾಗಿ ಸುರೇಶ್ ಕುಮಾರ್ ಅವರು ಸಲ್ಲಿಸಿದ್ದ ನಾಮಪತ್ರವನ್ನು ಹಿಂದಕ್ಕೆ ಪಡೆದುಕೊಳ್ಳುವಂತೆ ಸೂಚಿಸಿ, ನಿಮ್ಮನ್ನು ಅವಿರೋಧವಾಗಿ ಆಯ್ಕೆ ಮಾಡಿದೆವು ಎಂದು ಹೇಳಿದ್ದಾರೆ. 
ನೀವು ಸರಳ ಹಾಗೂ ನಿಷ್ಠುರ ವ್ಯಕ್ತಿ. ಆ ಸ್ಥಾನದಲ್ಲಿ ಕುಳಿತ ಮೇಲೆ ಯಾವುದೇ ಪೂರ್ವಾಗ್ರಹವಿಲ್ಲದೆ ಅತ್ಯಂತ ಪಾರದರ್ಶಕವಾಗಿ ನಿರ್ಧಾರ ತೆಗೆದುಕೊಳ್ಳುತ್ತೀರೆಂಬ ವಿಶ್ವಾಸವಿದೆ. ಈಗಾಗಲೇ ಆಯ್ಕೆಯಾಗಿರುವ ಹೊಸ ಶಾಸಕರಿಗೆ ಹೆಚ್ಚು ಅವಕಾಶ ನೀಡಿ, ಮಾರ್ಗದರ್ಶನ ನೀಡುತ್ತೀರೆಂದು ಭಾವಿಸುತ್ತೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com