ರಾಜ್ಯದಲ್ಲಿ ಜೆಡಿ (ಎಸ್) -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಇರುವ ಹೊರತಾಗಿಯೂ ಈ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರತ್ಯೇಕ ಸ್ಪರ್ಧೆಗಿಳಿದಿದೆ. ಕಾಂಗ್ರೆಸ್ ನ ಮುನಿರತ್ನ, ಜೆಡಿಎಸ್ ನಿಂದ ರಾಮಚಂದ್ರಪ್ಪ ಕಣದಲ್ಲಿದ್ದಾರೆ.ಚುನಾವಣೆಯ ಪ್ರಚಾರದ ಕೊನೆಯ ದಿನವಾದ ಶನಿವಾರ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ್ದಾರೆ.