ಇದೇ ವೇಳೆ ತಮ್ಮನ್ನು ಆರಿಸಿದ ಕ್ಷೇತ್ರದ ಜನರನ್ನೂ ನಾನು ಮರೆಯುವಂತಿಲ್ಲ. ಯಾವುದೇ ಕಾರಣಕ್ಕೂ ನನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯ ಕುಂಠಿತವಾಗಬಾರದು. ಅದಕ್ಕೆ ನಾನು ಆಸ್ಪದ ಕೂಡ ನೀಡುವುದಿಲ್ಲ. ಸಚಿವ ಸ್ಥಾನ ಬಿಟ್ಟು ಸ್ಪೀಕರ್ ಆದಾಕ್ಷಣ ಕ್ಷೇತ್ರದ ಅಭಿವೃದ್ದಿ ಕುಂಠಿತ ಆಗುವುದಿಲ್ಲ. ಇನ್ನೂ ಹೆಚ್ಚಿನ ಕೆಲಸ ಮಾಡುತ್ತೇನೆ. ಜೂನ್ 7 ರಂದು ಕೆ.ಸಿ.ವ್ಯಾಲಿ ಯೋಜನೆಗೆ ಸಿಎಂ ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್ ಚಾಲನೆ ನೀಡುತ್ತಾರೆ. ಈ ಹಿಂದೆ, ಈ ಯೋಜನೆಗೆ ಕುಮಾರಸ್ವಾಮಿ ವಿರೋಧ ಮಾಡಿದ್ದರು. ಆದರೆ, ಈಗ ವಿರೋಧ ಮಾಡಲು ಆಗಲ್ಲ ಎಂದು ರಮೇಶ್ ಕುಮಾರ್ ಮಾರ್ಮಿಕವಾಗಿ ಹೇಳಿದ್ದಾರೆ.