ಹಣ-ಅಧಿಕಾರದ ಮದದಿಂದ ಬಿಜೆಪಿ ಅಭ್ಯರ್ಥಿಯ ಖರೀದಿ, ಡಿಕೆಶಿಗೆ ಒಳ್ಳೆಯದಾಗಲಿ: ಬಿಎಸ್ ವೈ ಗರಂ

ರಾಮನಗರ ಉಪಚುನಾವಣಾ ಕಣದಿಂದ ಬಿಜೆಪಿ ಅಭ್ಯರ್ಥಿ ಕಮಲ ಬಿಟ್ಟು ಕೈ ಸೇರಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಹಾಲಿ ರಾಜಕೀಯ ಬೆಳವಣಿಗೆ ಕುರಿತು ತೀವ್ರ ಗರಂ ಆಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಶಿವಮೊಗ್ಗ: ರಾಮನಗರ ಉಪಚುನಾವಣಾ ಕಣದಿಂದ ಬಿಜೆಪಿ ಅಭ್ಯರ್ಥಿ ಕಮಲ ಬಿಟ್ಟು ಕೈ ಸೇರಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಹಾಲಿ ರಾಜಕೀಯ ಬೆಳವಣಿಗೆ ಕುರಿತು ತೀವ್ರ ಗರಂ ಆಗಿದ್ದಾರೆ.
ಉಪ ಚುನಾವಣೆಗೆ ಇನ್ನು ಕೇವಲ 2 ದಿನ ಬಾಕಿ ಇರುವಂತೆ ಅಲ್ಲದೆ ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾದ ಇಂದು ರಾಮನಗರ ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್ ಕಣದಿಂದ ಹಿಂದೆ ಸರಿದಿದ್ದು, ಮಾತ್ರವಲ್ಲದೇ ತಮ್ಮ ಮಾತೃ ಪಕ್ಷಕ್ಕೆ ಹೋಗುವುದಾಗಿ ಘೋಷಣೆ ಮಾಡಿದ್ದಾರೆ.
ಈ ಬೆಳವಣಿಗೆ ರಾಜ್ಯ ಬಿಜೆಪಿಗೆ ದೊಡ್ಡ ಆಘಾತ ನೀಡಿದ್ದು, ಈ ಬಗ್ಗೆ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು, ಸಚಿವ ಡಿಕೆ ಶಿವಕುಮಾರ್ ಅವರು ಹಣ ಕೊಟ್ಟು ರಾಮನಗರ ಬಿಜೆಪಿ ಅಭ್ಯರ್ಥಿಯನ್ನು ಖರೀದಿಸಿದ್ದಾರೆ. ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದು ಮಾರ್ಮಿಕವಾಗಿ ಹೇಳಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com