ಉಪ ಚುನಾವಣೆ: 5 ಕ್ಷೇತ್ರಗಳ ಮತದಾನ ಅಂತ್ಯ, ಜಮಖಂಡಿಯಲ್ಲಿ ಶೇ.74ರಷ್ಟು ಮತದಾನ

ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಶನಿವಾರ ನಡೆದ ಮತದಾನ ಪ್ರಕ್ರಿಯೆ...
ಹಕ್ಕು ಚಲಾಯಿಸಿದ ಬಿಎಸ್ ವೈ ಕುಟುಂಬ
ಹಕ್ಕು ಚಲಾಯಿಸಿದ ಬಿಎಸ್ ವೈ ಕುಟುಂಬ
ಬೆಂಗಳೂರು: ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಶನಿವಾರ ನಡೆದ ಮತದಾನ ಪ್ರಕ್ರಿಯೆ ಅಂತ್ಯವಾಗಿದ್ದು, ಜಮಖಂಡಿಯಲ್ಲಿ ಅತಿ ಹೆಚ್ಚು ಮತದಾನವಾಗಿದೆ.
ಸಂಜೆ 5 ಗಂಟೆ ವೇಳೆಗೆ ಜಮಖಂಡಿಯಲ್ಲಿ ಶೇ.74, ಮಂಡ್ಯದಲ್ಲಿ ಶೇ.48.6ರಷ್ಟು, ಶಿವಮೊಗ್ಗದಲ್ಲಿ ಶೇ.60.50ರಷ್ಟು ಮತದಾನವಾಗಿದೆ.
ಇಂದು ಬೆಳಗ್ಗೆ 7ಗಂಟೆಯಿಂದ ಆರಂಭವಾದ ಮತದಾನ ಸಂಜೆ 6ಗಂಟೆಗೆ ಮುಕ್ತಾಯವಾಗಿದೆ. ಎಲ್ಲಾ ಐದು ಕ್ಷೇತ್ರಗಳಲ್ಲೂ ಶಾಂತಿಯುತ ಮತದಾನ ನಡೆದಿದ್ದು, ಮಂಡ್ಯದಲ್ಲಿ ಮಾತ್ರ ಮಳೆಯಿಂದಾಗಿ ಮತದಾನಕ್ಕೆ ಕೆಲ ಕಾಲ ಅಡ್ಡಿಯಾಗಿತ್ತು. 
ಜಮಖಂಡಿ, ರಾಮನಗರ ವಿಧಾನಸಭಾ ಕ್ಷೇತ್ರಗಳು ಹಾಗೂ  ಬಳ್ಳಾರಿ, ಮಂಡ್ಯ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆದಿದ್ದು, ನವೆಂಬರ್ 6 ರಂದು ಫಲಿತಾಂಶ ಪ್ರಕಟವಾಗಲಿದೆ.
ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಎಸ್ ಉಗ್ರಪ್ಪ, ಬಿಜೆಪಿಯಿಂದ ಜೆ.ಶಾಂತಾ, ಪಕ್ಷೇತರರಾಗಿ ಡಾ.ಟಿಆರ್ ಶ್ರೀನಿವಾಸ್, ಪಂಪಾವತಿ ಕಣದಲ್ಲಿದ್ದಾರೆ.
ಶಿವಮೊಗ್ಗದಲ್ಲಿ ಬಿಜೆಪಿಯಿಂದ ಬಿವೈ ರಾಘವೇಂದ್ರ, ಜೆಡಿಎಸ್ ನಿಂದ ಮಧು ಬಂಗಾರಪ್ಪ, ಜೆಡಿಯು ನಿಂದ ಮಹಿಮಾ ಪಾಟೀಲ್ ಸ್ಪರ್ಧಿಸಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಶಿವರಾಮೇಗೌಡ, ಬಿಜೆಪಿಯಿಂದ ಡಾ.ಸಿದ್ದರಾಮಯ್ಯ ಹಾಗೂ ಏಳು ಪಕ್ಷೇತರರು ಅಖಾಡದಲ್ಲಿದ್ದಾರೆ.
ಇನ್ನು ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಶ್ರೀಕಾಂತ ಕುಲಕರ್ಣಿ, ಕಾಂಗ್ರೆಸ್-ಜೆಡಿಎಸ್ ನಿಂದ ಆನಂದ ಸಿದ್ದು ನ್ಯಾಮಗೌಡ, ಪ್ರಜಾ ಪರಿವರ್ತನ ಪಾರ್ಟಿಯ ಪರಶುರಾಮ ಮಹಾರಾಜನವರ, ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದಿಂದ ಯಮನಪ್ಪ ಗುಣದಾಳ ಹಾಗೂ ನಾಲ್ಕು ಮಂದಿ ಪಕ್ಷೇತರರು ಸ್ಪರ್ಧಿಸುತ್ತಿದ್ದಾರೆ.
ರಾಮನಗರ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿ(ಜೆಡಿಎಸ್), ಚಂದ್ರಶೇಖರ್ (ಬಿಜೆಪಿ) ಹಾಗೂ ಐವರು ಪಕ್ಷೇತರರು ಅಭ್ಯರ್ಥಿಗಳಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com