ರಾಮನಗರದಲ್ಲಿ ಮತ ಎಣಿಕೆಗೆ ಮುನ್ನವೇ ಗೆದ್ದ ಅನಿತಾ ಕುಮಾರಸ್ವಾಮಿ!

ರಾಷ್ಟ್ರದ ಗಮನ ಸೆಳೆದಿರುವ ಕರ್ನಾಟಕದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಸ್ಥಾನಗಳ ಚುನಾವಣೆ ಫಲಿತಾಂಶ ಇಂದು ಘೋಷಣೆಯಾಗಲಿದೆ.
ಅನಿತಾ ಕುಮಾರಸ್ವಾಮಿ
ಅನಿತಾ ಕುಮಾರಸ್ವಾಮಿ
Updated on
ರಾಮನಗರ: ರಾಷ್ಟ್ರದ ಗಮನ ಸೆಳೆದಿರುವ ಕರ್ನಾಟಕದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಸ್ಥಾನಗಳ ಚುನಾವಣೆ ಫಲಿತಾಂಶ ಇಂದು ಘೋಷಣೆಯಾಗಲಿದೆ. 
ದೀಪಾವಳಿಯ ದಿನವೇ ಪ್ರಕಟವಾಗುತ್ತಿರುವ ಫಲಿತಾಂಶದಲ್ಲಿ ಯಾರಿಗೆ ಸಿಹಿ, ಯಾರಿಗೆ ಕಹಿ ಎಂದು ಇನ್ನೂ ನಿರ್ಧರಿಸಬೇಕಾಗಿದೆ. ಆದರೆ ಈ ನಡುವೆ ರಾಮನಗರದ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ ಎಂದು ಬ್ಯಾನರ್ ಹಾಕಲಾಗಿದೆ!
ಮತ ಎಣಿಕೆಗೆ ಮುನ್ನವೇ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ ಎಂದು ನಗರದ ಅಲ್ಲಲ್ಲಿ ಬ್ಯಾನರ್ ಹಾಕಲಾಗಿದೆ.
ಜೆಡಿಎಸ್-ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ  ಗೆದ್ದಿದ್ದಾರೆ ಎಂದು ಬ್ಯಾನರ್ ನಲ್ಲಿ ಬರೆಯಲಾಗಿದೆ.ಜೆಡಿಎಸ್ ಕಾರ್ಯಕರ್ತರು ಮತ ಎಣಿಕೆಯ ಮುನ್ನವೇ ಬ್ಯಾನರ್ ತಯಾರಿಸಿ ಅಲ್ಲಲ್ಲಿ ಪ್ರದರ್ಶಿಸಿದ್ದಾರೆ.
ರಾಮನಗರದಲ್ಲಿ ನವೆಂಬರ್ 3ಕ್ಕೆ ಮತದಾನ ನಡೆದಿದ್ದು ಶೇ. 71.88 ಮತದಾನವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com