ಶಿವಮೊಗ್ಗ ಉಪ ಚುನಾವಣೆ: ಬಿವೈ ರಾಘವೇಂದ್ರಗೆ ಭಾರೀ ಅಂತರದ ಗೆಲುವು

ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಬಾರೀ ಅಂತರದ ಜಯ ಸಾಧಿಸಿದ್ದಾರೆ.
ಬಿವೈ ರಾಘವೇಂದ್ರ
ಬಿವೈ ರಾಘವೇಂದ್ರ
Updated on
ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಬಾರೀ ಅಂತರದ ಜಯ ಸಾಧಿಸಿದ್ದಾರೆ.
ಬಿಜೆಪಿಗೆ ಸೆಡ್ಡು ಹೊಡೆಯುವ ಸಲುವಾಗಿ ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಧು ಬಂಗಾರಪ್ಪಗೆ ಭಾರೀ ಮುಖಭಂಗವಾಗಿದೆ.ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ 50 ಸಾವಿರಕ್ಕಿಂತ ಅಧಿಕ ಮತಗಳ ಅಂತರದಿಂದ ವಿಜೇತರಾಗಿದ್ದಾರೆ.
ಬಿಜೆಪಿಯ ರಾಘವೇಂದ್ರ ಅವರಿಗೆ 5,42,956 ಮತಗಳು, ಜೆಡಿಎಸ್ ನ ಮಧುಬಂಗಾರಪ್ಪ ಅವರಿಗೆ 4,90,788 ಮತಗಳು ಬಂದಿದೆ.ರಾಘವೇಂದ್ರ ಅವರಿಗೆ 52,168 ಮತಗಳ ಅಂತರದಿಂಡ ಗೆಲುವಾಗಿದೆ
ಇದೇ ವೇಳೆ ಮಂಡ್ಯ, ಬಳ್ಳಾರಿಗಳಲ್ಲಿ ಕ್ರಮವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಜಯಭೇರಿ ಬಾರಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com