ಮಂಡ್ಯ ಲೋಕಸಭೆ ಹಾಗೂ ರಾಮನಗರ ವಿಧಾನಸಭೆ ಕ್ಷೇತ್ರಗಳನ್ನ ಗೆಲ್ಲುವಲ್ಲಿ ಜೆಡಿಸ್ ಯಶಸ್ವಿಯಾಗಿದೆ, ಶಿವಮೊಗ್ಗದಲ್ಲಿ ಯಡಿಯೂರಪ್ಪ ಪುತ್ರ ಬಿ,ವೈ ರಾಘವೇಂದ್ರಗೆ ಪ್ರಬಲ ಫೈಟ್ ನೀಡಿದೆ, ಮಧು ಬಂಗಾರಪ್ಪಗೆ ಕಾಂಗ್ರೆಸ್ ಬೆಂಬಲ ನೀಡಿತ್ತು,. 2014 ರಲ್ಲಿ ಮೂರೂವರೆ ಲಕ್ಷ ಮತಗಳಿಂದ ಗೆಲುವು ಸಾಧಿಸಿದ್ದ ಬಿಜೆಪಿ ಈ ಬಾರಿ ಕೇವಲ 50 ಸಾವಿರ ಮತಗಳ ಅಂತರದಿಂದ ಜಯ ಸಾಧಿಸಿದೆ. ಜಾತ್ಯಾತೀತ ಶಕ್ತಿಗಳು ಒಂದಾದರೇ ಬಿಜೆಪಿಯನ್ನು ಮಣಿಸಬಹುದು ಎಂಬ ಪ್ರಬಲ ಸಂದೇಶವನ್ನು ಈ ಉಪ ಚುನಾವಣೆ ಫಲಿತಾಂಶ ನೀಡಿದೆ ಎಂದು ಜೆಡಿಎಸ್ ಮುಖಂಡ ರಮೇಶ್ ಬಾಬು ಹೇಳಿದ್ದಾರೆ.