ಇನ್ನೂ ಶಿವಮೊಗ್ಗವನ್ನು ಉಳಿಸಿಕೊಳ್ಳಲು ಯಡಿಯೂರಪ್ಪ ಹರಸಾಹಸ ಮಾಡಿದ್ದಾರೆ. ಮಧು ಬಂಗಾರಪ್ಪ ವಿರುದ್ಧ ಬಿ.ವೈ ರಾಘವೇಂದ್ರ ಗೆಲುವು ಸಾಧಿಸಿದ್ದಾರೆ, ಆದರೆ ಕೇವಲ 52 ಸಾವಿರ ಮತಗಳಿಂದ ಮಾತ್ರ, 2014 ರಲ್ಲಿ ಯಡಿಯೂರಪ್ಪ 3.50 ಲಕ್ಷ ಮತಗಳಿಂದ ಭರ್ಜರಿ ಜಯ ಸಾಧಿಸಿದ್ದರು. ಇನ್ನೂ ಜಮಖಂಡಿ ವಿಧಾನಸಭೆ ಚುನಾವಣೆ ಫಲಿತಾಂಶ ಇವುಗಳಿಗಿಂತ ಭಿನ್ನವಾಗಿಲ್ಲ, ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ 40 ಸಾವಿರ ಮತಗಳಿಂದ ಜಯ ಸಾಧಿಸಿದ್ದಾರೆ.