ರೈತ ಮಹಿಳೆ ಜಯಶ್ರೀ ಗುರುನ್ನವರ್ ಅವರು ಬೆಳಗಾವಿ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ವಿವಿಧ ಬೇಡಿಕೆ ಹಾಗೂ ದರ ನಿಗದಿ ಮಾಡುವಂತೆ ಸರ್ಕಾರದ ವಿರುದ್ಧ ಕಟುವಾಗಿ ಮಾತನಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಾಲ್ಕು ವರ್ಷಗಳಿಂದ ಎಲ್ಲಿ ಮಲಗಿದ್ದೆ? ಈಗ ಮಾತನಾಡೋಕೆ ಬಂದಿದ್ದೀರಾ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮತ ಹಾಕುವಾಗ ನನ್ನ ನೆನಪಾಗಲಿಲ್ಲವೆ ಎಂದು ಪ್ರಶ್ನಿಸಿದ್ದರು.