ಉತ್ತರ ಕರ್ನಾಟಕದ ಇಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಮೇಲೆ ಹೆಚ್ಚಿನ ಒತ್ತಡವಿದೆ. ಕುರುಬ ಸಮುದಾಯಕ್ಕೆ ಸೇರಿದ ಶಾಸಕ ಸಿ.ಎಸ್ ಶಿವಳ್ಳಿಗೆ ನೀಡಲು ಸಿದ್ದರಾಮಯ್ಯ ಅವರಿಗೆ ಮನಸ್ಸಿದೆ, ಜೊತೆಗೆ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಕೂಡ ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದು, ಅವರು ಕೂಡ ಲಾಬಿ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ,