ಮೇಯರ್ ಚುನಾವಣೆ ಸೋಲು: ಅಶೋಕ್ ಗೆ ಸಂತೋಷ್ ತಪರಾಕಿ: ಮಾಜಿ ಡಿಸಿಎಂ ಪರ ಬಿಎಸ್ ವೈ ಬ್ಯಾಟಿಂಗ್

ರಾಜ್ಯ ಬಿಜೆಪಿ ಅಧ್ಯಕ್ಷ ಬಿ,ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಷ್ಟ್ರೀಯ ಜಂಟಿ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ನಡುವಿನ ಶೀತಲ ಸಮರಕ್ಕೆ ....
ಸಂತೋಷ್ , ಆರ್ .ಅಶೋಕ್ ಮತ್ತು ಯಡಿಯೂರಪ್ಪ
ಸಂತೋಷ್ , ಆರ್ .ಅಶೋಕ್ ಮತ್ತು ಯಡಿಯೂರಪ್ಪ
ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ,ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಷ್ಟ್ರೀಯ ಜಂಟಿ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ನಡುವಿನ ಶೀತಲ ಸಮರಕ್ಕೆ ಬಿಬಿಎಂಪಿ ಮೇಯರ್ ಚುನಾವಣೆ ವೇದಿಕೆಯಾಗಿ ಮಾರ್ಪಟ್ಟಿದೆ. 
ಮಾಜಿ ಡಿಎಸಿಎಂ ಆರ್ . ಅಶೋಕ್ ವಿರುದ್ಧ ಸಾಮಾಜಿಜ ಜಾಲತಾಣ ಫೇಸ್ ಬುಕ್ ನಲ್ಲಿ ಸಂತೋಷ್ ಕಿಡಿಕಾರಿದ್ದಾರೆ. ತಂಡದ ಸ್ಪೂರ್ತಿ ಇಲ್ಲದವರು, ಗೆಲುವಿನ ಕೀರ್ತಿಯನ್ನು ಹಂಚಿಕೊಳ್ಳದವರು ಗೆಲುವು ಸಾಧಿಸಲಾರರು ಎಂದು ಅಶೋಕ್ ವಿರುದ್ಧ ಸಂತೋಷ್ ಪರೋಕ್ಷವಾಗಿ ಕಿಡಿಕಾರಿದ್ದರು
ಬಿಬಿಎಂಪಿ ಮೇಯರ್​​-ಉಪಮೇಯರ್​ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲು ಪಕ್ಷದ ವೈಫಲ್ಯ ಕಾರಣ ಹೊರತು, ಯಾರನ್ನು ದೂರುವ ಅಗತ್ಯವಿಲ್ಲ. ಆರ್.ಅಶೋಕ್ ಅವರು ಪ್ರಾಮಾಣಿಕವಾಗಿ ಪಕ್ಷಕ್ಕಾಗಿ ಪ್ರಯತ್ನಿಸಿದ್ಧಾರೆ. ಕೊನೆ ಘಳಿಗೆಯಲ್ಲಿ ಅನಂತ್ ಕುಮಾರ್ ಮತ್ತು ನಿರ್ಮಲಾ ಸೀತರಾಮನ್  ಇಲ್ಲದ ಕಾರಣ ನಾವು ಸೋಲಬೇಕಾಯಿತು' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​​ ಯಡಿಯೂರಪ್ಪ ಅವರು ಸಮರ್ಥಿಸಿಕೊಂಡಿದ್ದಾರೆ.
ಅನಗತ್ಯವಾಗಿ ಟೀಕಿಸುವುದು ಸರಿಯಲ್ಲ. ಅಶೋಕ್ ಮೇಲೆ ಕೆಲವರು ಸುಮ್ಮನೆ ಕಲ್ಲು ಹೊಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪ ತಿರುಗೇಟು ಕೊಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com