ಕುತೂಹಲ ಮೂಡಿಸಿದ ಡಿ.ಕೆ.ಶಿವಕುಮಾರ್ ಉಪಾಹಾರ ಕೂಟ: ಸಿದ್ದರಾಮಯ್ಯ, ರಮೇಶ್ ಜಾರಕಿಹೊಳಿ ಗೈರು!

ಸಚಿವರಿಗೆ ಡಿ.ಕೆ.ಶಿವಕುಮಾರ್ ತಮ್ಮ ನಿವಾಸದಲ್ಲಿ ಉಪಾಹಾರ ಕೂಟ ಆಯೋಜಿಸುವ ಮೂಲಕ ಭಾರೀ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದ್ದಾರೆ. ...
ಡಿ,ಕೆ ಶಿವಕುಮಾರ್
ಡಿ,ಕೆ ಶಿವಕುಮಾರ್
ಬೆಂಗಳೂರು: ಸಚಿವರಿಗೆ ಡಿ.ಕೆ.ಶಿವಕುಮಾರ್ ತಮ್ಮ ನಿವಾಸದಲ್ಲಿ ಉಪಾಹಾರ ಕೂಟ ಆಯೋಜಿಸುವ ಮೂಲಕ ಭಾರೀ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದ್ದಾರೆ.
ಡಿ.ಕೆ.ಶಿವಕುಮಾರ್‌ ಅವರು ಗುರುವಾರ ಬೆಳಗ್ಗೆ ಕ್ರೆಸೆಂಟ್‌ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಕಾಂಗ್ರೆಸ್‌ ಸಚಿವರಿಗೆ ಉಪಾಹಾರ ಕೂಟ ಆಯೋಜಿಸಿ ಮಹತ್ವದ ಚರ್ಚೆ ನಡೆಸಿದ್ದಾರೆ. 
ಸಭೆಯಲ್ಲಿ ಕಾಂಗ್ರೆಸ್‌ನ ಸಚಿವರಾದ ಡಿಸಿಎಂ ಡಾ.ಜಿ.ಪರಮೇಶ್ವರ್‌, ಹಿರಿಯ ಸಚಿವ ಆರ್‌.ವಿ ದೇಶ್‌ಪಾಂಡೆ ,ಸಚಿವೆ  ಜಯಮಾಲಾ, ಪಕ್ಷೇತರ ಶಾಸಕ, ಸಚಿವ ಆರ್‌.ಶಂಕರ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು. 
ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಮತ್ತು ಸಚಿವ ರಮೇಶ್‌ ಜಾರಕಿಹೊಳಿ ಅವರ ಗೈರು ಎದ್ದು ಕಾಣುತ್ತಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com