ಉಪ ಚುನಾವಣೆ ಘೋಷಣೆಗೆ ಕಾಂಗ್ರೆಸ್ ಆಕ್ಷೇಪ

ಲೋಕಸಭಾ ಸಾರ್ವತ್ರಿಕ ಚುನಾವಣೆಗೆ 6 ತಿಂಗಳು ಬಾಕಿಯಿದ್ದು ಇಂತಹ ಸಂದರ್ಭದಲ್ಲಿ ರಾಜ್ಯದ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಮಾಡಿದ ಕೇಂದ್ರ ಚುನಾವಣೆ ಆಯೋಗದ ನಿರ್ಧಾರಕ್ಕೆ ಕಾಂಗ್ರೆಸ್ ಶನಿವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ...
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
ಬೆಂಗಳೂರು; ಲೋಕಸಭಾ ಸಾರ್ವತ್ರಿಕ ಚುನಾವಣೆಗೆ 6 ತಿಂಗಳು ಬಾಕಿಯಿದ್ದು ಇಂತಹ ಸಂದರ್ಭದಲ್ಲಿ ರಾಜ್ಯದ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಮಾಡಿದ ಕೇಂದ್ರ ಚುನಾವಣೆ ಆಯೋಗದ ನಿರ್ಧಾರಕ್ಕೆ ಕಾಂಗ್ರೆಸ್ ಶನಿವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. 
ಈ ಕುರಿತಂತೆ ಮಾತನಾಡಿರುವ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು, ಕೇಂದ್ರ ಸರ್ಕಾರದ ಅಧಿಕಾರಾವಧಿ ಇನ್ನು ಕೇವಲ ಆರು ತಿಂಗಳಷ್ಟೇ ಬಾಕಿಯಿದೆ. ನಂತರ ಲೋಕಸಭಾ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಲಿದೆ. ಹೀಗಿರುವಾಗ ಇದೀಗ ಉಪ ಚುನಾವಣೆ ನಡೆಸುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ. 
ಆಯೋಗದ ನಿರ್ಧಾರ ಅಚ್ಚರಿ ತಂದಿದೆ. 6 ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಬೇಕಿದೆ. ಈ ಸಂದರ್ಭದಲ್ಲಿ ಲೋಕಸಭಾ ಚುನಾವಣೆ ಅಗತ್ಯವಿರಲಿಲ್ಲ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com