ಇತಿಹಾಸದಲ್ಲಿ 52 ಸಾವಿರ ಲೀಡ್ ನಲ್ಲಿ ನಾಗಮಂಗಲದಲ್ಲಿ ಗೆದ್ದಿದ್ದು ನೋಡಿದ್ದೀರಾ. ಚೆಲುವರಾಯಸ್ವಾಮಿ ಅವರನ್ನು ಜನರು ಸ್ವಲ್ಪ ಬಾಯಿಮುಚ್ಚಿಕೊಂಡು ಇರಲಿ ಎಂದು ಜನ ಸೋಲಿಸಿ ಕಳುಹಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ನಮ್ಮ ಪಕ್ಷದಲ್ಲಿ ಸಮರ್ಥರಿದ್ದಾರೆ. ಸ್ಪರ್ಧೆಯೂ ಇದೆ. ಅಂತಿಮವಾಗಿ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು, ಸಿಎಂ ಕುಮಾರ ಸ್ವಾಮಿ ತೀರ್ಮಾನ ಮಾಡುತ್ತಾರೆ. ಹೀಗೆ ತೀರ್ಮಾನ ಮಾಡಿದ ಅಭ್ಯರ್ಥಿಯನ್ನು ಅತ್ಯಂತ ಅಂತರದಿಂದ ಮಂಡ್ಯ ಲೋಕಸಭಾ ಕ್ಷೇತ್ರದ ಜನತೆ ಗೆಲ್ಲಿಸಿಕೊಡುತ್ತಾರೆ ಅಂತ ವಿಶ್ವಾಸ ವ್ಯಕ್ತಪಡಿಸಿದ್ದಾರೆ.