ನಿನ್ನೆ ತಡರಾತ್ರಿ ನಡೆದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ನಿರೀಕ್ಷೆಯಂತೆಯೇ ರಾಮನಗರ ವಿಧಾನಸಭಾ ಕ್ಷೇತ್ರ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರ, ಬಳ್ಳಾರಿ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಮತ್ತು ಜಂಟಿ ಪ್ರಚಾರಾಂದೋಲನ ನಡೆಸಿ ಬಿಜೆಪಿಗೆ ಎಲ್ಲಾ ಐದೂ ಕ್ಷೇತ್ರಗಳಲ್ಲೂ ಸೋಲುಣಿಸಲು ತೀರ್ಮಾನಿಸಲಾಗಿದೆ.